Friday, January 25, 2019

ಪೆರ್ವಾಜೆಶಾಲೆಗೆ ಅತ್ಯುತ್ತಮ ಮತದಾರ ಸಾಕ್ಷರತಾ ಕ್ಲಬ್ ಪ್ರಶಸ್ತಿ


ಮತದಾರ ದಿನವಾದ ಜನವರಿ 25 ರಂದು ಉಡುಪಿಯ ಪುರಭವನದಲ್ಲಿ ನಡೆದ ಸಮಾರಂಭದಲ್ಲಿ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಶಾಲೆಯ ಮತದಾರ ಸಾಕ್ಷರತಾ ಕ್ಲಬ್‍ನ್ನು ಜಿಲ್ಲೆಅತ್ಯುತ್ತಮ ಕ್ಲಬ್ ಎಂದು ಗುರುತಿಸಿ ಮುಖ್ಯೋಪಾಧ್ಯಾಯಿನಿಯವರಾದ ಶ್ರೀಮತಿ ಕೆ. ಹರ್ಷಿಣಿರವರನ್ನು ಸನ್ಮಾನಿಸಲಾಯಿತು. ಉಡುಪಿ ಜಿಲ್ಲಾಧಿಕಾರಿಯವರಾದ ಶ್ರೀಮತಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಇವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.ಉಡುಪಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸಿಂಧು ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ಶ್ರೀಮತಿ ಶ್ರೀವಿದ್ಯಾ, ಜಿ.ಶಂಕರ್ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಭಾಸ್ಕರ ಶೆಟ್ಟಿ, ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು







Thursday, January 24, 2019

ನೇತಾಜಿಯವರ ಜನ್ಮ ದಿನಾಚರಣೆ


 
 ದಿನಾಂಕ:-23-01-2019 ಬುಧವಾರದಂದು ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ನೇತಾಜಿ ಸುಭಾಸ್‍ಚಂದ್ರ ಭೋಸ್‍ರ 122ನೇ ಜನ್ಮ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಮುನಿರಾಜ ರೆಂಜಾಳ-ಮುಖ್ಯೋಪಾಧ್ಯಾಯರು ಜೈನ ಪ್ರೌಢಶಾಲೆ ಮೂಡಬಿದ್ರೆ,  ಶ್ರೀ ಕೃಷ್ಣಕಾಂತ್-ಎ.ಎಸ್.ಪಿ. ಕಾರ್ಕಳ ನಗರ ಪೊಲೀಸ್ ಠಾಣೆ, ಶ್ರೀ ಸುರೇಶ್ ಮಡಿವಾಳ-ಸಂತೂರ್ ಡಿಸ್ಟ್ರಿಬ್ಯೂಟರ್, ಶ್ರೀ ಶೇಕ್ ಮುಸ್ತಾಫ, ಶ್ರೀ ಶಶಿಧರ ಹೆಚ್.-ಆರೋಗ್ಯ ಶಿಕ್ಷಣಾಧಿಕಾರಿಗಳು ಕಾರ್ಕಳ,   ಶ್ರೀ ವಿಜಯರಾಜ್ ಶೆಟ್ಟಿ-ಅಧ್ಯಕ್ಷರು ಎಸ್.ಡಿ.ಎಂ.ಸಿ., ಶ್ರೀಮತಿ ಕೆ. ಹರ್ಷಿಣಿ-ಮುಖ್ಯೋಪಾಧ್ಯಾಯರು, ಹಿರಿಯ ಶಿಕ್ಷಕರಾದ ಶ್ರೀ ಕಾಳಿದಾಸ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅತಿಥಿಗಳು ಮತ್ತು ವಿದ್ಯಾರ್ಥಿಗಳು ನೇತಾಜಿಯವರ ಜೀವನ, ಸ್ವಾತಂತ್ರ್ಯ ಹೋರಾಟ, ಕ್ರಾಂತಿಕಾರಿ ಬದುಕು, ಉದಾತ್ತ ವಿಚಾರಗಳ ಕುರಿತು ಮಾತನಾಡಿದರು.  ವಿದ್ಯಾರ್ಥಿಗಳು ಓದಿದ ಪುಸ್ತಕಗಳ ಅನಿಸಿಕೆಗಳ ಸಂಗ್ರಹ ‘ಸಂಕಲ್ಪ’, ಶಾಲಾ ಮಾಸಿಕ ಪತ್ರಿಕೆ ‘ಗೋಮತಿ’ ಮತ್ತು              7 ತರಗತಿಗಳ ಮಾಸಿಕ ಪತ್ರಿಕೆಗಳನ್ನು ಅನಾವರಣಗೊಳಿಸಲಾಯಿತು. ಉತ್ತಮ ಅನಿಸಿಕೆ ಬರೆದ ವಿದ್ಯಾರ್ಥಿಗಳನ್ನು ಬಹುಮಾನಿಸಲಾಯಿತು. ಸಂತೂರ್ ಪ್ರಾಯೋಜಕತ್ವದಲ್ಲಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆ ವಿಜೇತರನ್ನು, ಆರೋಗ್ಯ ಇಲಾಖೆ ನಡೆಸಿದ್ದ ಪ್ರಬಂಧ ಸ್ಪರ್ಧೆ ವಿಜೇತರನ್ನು ಬಹುಮಾನಿಸಲಾಯಿತು. ಕು| ರಕ್ಷಿತಾ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು. ಕು| ಸಂಧ್ಯಾ ಸರ್ವರನ್ನೂ ವಂದಿಸಿದರು. ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.






Wednesday, January 23, 2019

ಪೆರ್ವಾಜೆ ಶಾಲೆಯ ತರಕಾರಿ ತೋಟ

ಎಲ್ಲ ಸರಕಾರಿ ಶಾಲೆಗಳಲ್ಲೂ ಮದ್ಯಾಹ್ನದ  ಉಚಿತ ಬಿಸಿಯೂಟ ಲಭ್ಯವಿದೆ. ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ಒಪ್ಪಂದದಲ್ಲಿ ಘೋಷಿಸಲ್ಪಟ್ಟಿರುವಂತೆ ಪ್ರತಿಯೊಬ್ಬ ಹಸಿದ ಮಗುವಿಗೂ ಆಹಾರವನ್ನು ಒದಗಿಸಬೇಕಾಗಿದೆ. ಮಧ್ಯಾಹ್ನ ಉಪಹಾರ ಯೋಜನೆಯು ಒಂದು ಪ್ರತಿಷ್ಠಿತ ಯೋಜನೆಯಾಗಿದ್ದು, ಮಕ್ಕಳು ಆರೋಗ್ಯಪೂರ್ಣವಾಗಿ ಶಕ್ತಿವಂತರು ಹಾಗೂ ದೃಢಕಾಯರಾಗಿ ಬೆಳೆಯಲು ಒಂದು ಸದವಕಾಶ ಕಲ್ಪಿಸುವ ಬದ್ಧತೆಯಿಂದ ಕೂಡಿದ್ದು, ಸಹಕಾರಿಯಾಗಿದೆ. ಸದರಿ ಕಾರ್ಯಕ್ರಮದ ಪ್ರಮುಖ ಉದ್ದೇಶವು ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಹಸಿವು ನೀಗಿಸಿ ತನ್ಮೂಲಕ ಅವರ ಕಲಿಕಾ ಸಾಮರ್ಥ್ಯಗಳನ್ನೂ ಮತ್ತು ಸಾಧನೆಗಳನ್ನು ಹೆಚ್ಚಿಸುವುದಾಗಿದೆ.
ಮಧ್ಯಾಹ್ನ ಬಿಸಿಯೂಟ ನೀಡುವುದರಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ 491 (ಅಂದಾಜು) ಕ್ಯಾಲೋರಿ ಹಾಗೂ 13.80 ಗ್ರಾಂ ಪ್ರೋಟೀನನ್ನು, ಉನ್ನತ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 728 (ಅಂದಾಜು) ಕ್ಯಾಲೋರಿ ಮತ್ತು 21 ಗ್ರಾಂ. ಪೋಟೀನನ್ನು ಒಳಗೊಂಡಂತೆ ಪೌಷ್ಠಿಕಾಂಶ ದೊರೆಯುತ್ತಿದೆ.
ಬೇಳೆ/ಕಾಳನ್ನು ಬಳಕೆಯನ್ನು ಕಡ್ಡಾಯಗೊಳಿಸಿದೆ. ಈ ತರಕಾರಿಗಳೊಂದಿಗೆ ಸ್ಥಳೀಯ ಆಹಾರ ಪದ್ಧತಿಯನ್ವಯ ಸ್ಥಳೀಯವಾಗಿ ಬೆಳೆಯುವ ಇತರೆ ತರಕಾರಿ/ ಗೆಡ್ಡೆ/ಗೆಣಸುಗಳನ್ನು ಬಳಸಲು ಪೆರ್ವಾಜೆ ಶಾಲೆಯಲ್ಲಿ ತರಕಾರಿ ತೋಟವನ್ನು ನಿರ್ವಹಿಸಲಾಗುತ್ತಿದೆ. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವೇದಾವತಿಯವರು ಮುಖ್ಯಶಿಕ್ಷಕರ ಮಾರ್ಗದರ್ಶನ ಮತ್ತು ಶಾಲೆಯ ಶಿಕ್ಷಕ ವೃಂದದ ಬೆಂಬಲ ಮತ್ತು ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯ ಮೂಲಕ ತರಕಾರಿ ತೋಟವನ್ನು ನಿರ್ವಹಿಸುತ್ತಿದ್ದಾರೆ.















ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ




   12-01-2019 ಶನಿವಾರದಂದು ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿದ್ದ ಶ್ರೀ ನಂಜ ನಾಯ್ಕ-ಸಬ್‍ಇನ್ಸ್‍ಪೆಕ್ಟರ್ ಕಾರ್ಕಳ ನಗರ ಪೊಲೀಸ್ ಠಾಣೆ ಇವರು ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಸಾಧನೆ ಮತ್ತು ಆದರ್ಶ ಗುಣಗಳ ಕುರಿತು ತಿಳಿಸಿದರು. ಶ್ರೀಮತಿ ಕೆ. ಹರ್ಷಿಣಿ-ಮುಖ್ಯೋಪಾಧ್ಯಾಯರು, ಹಿರಿಯ ಶಿಕ್ಷಕರಾದ ಶ್ರೀ ಕಾಳಿದಾಸ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ವಿವೇಕಾನಂದರ ಜೀವನ ಉದಾತ್ತ ವಿಚಾರಗಳ ಕುರಿತು ಮಾತನಾಡಿದರು. ಕಾರ್ಕಳ ನಗರ ಪೊಲೀಸ್ ಠಾಣೆ ವತಿಯಿಂದ ಉತ್ತಮವಾಗಿ ಮಾತನಾಡಿದ ಮಕ್ಕಳನ್ನು ಬಹುಮಾನಿಸಲಾಯಿತು. ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Thursday, January 17, 2019

ವಿಜ್ಞಾನ ರಂಗೋಲಿ

ಹತ್ತನೆಯ ತರಗತಿಯ ವಿಜ್ಞಾನ ಪುಸ್ತಕದಲ್ಲಿರುವ ಪರೀಕ್ಷಾ ಪ್ರಾಮುಖ್ಯತೆಯನ್ನು ಹೊಂದಿರುವ ಚಿತ್ರಗಳನ್ನು ದಿನಕ್ಕೊಂದರಂತೆ ರಂಗೋಲಿ ಹಾಕಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು
ನೀರಿನ ವಿದ್ಯದ್ವಿಭಜನೆ

ಸಸ್ಯದ ಸಂತಾನೋತ್ಪಾದಕ ಭಾಗ

ವಿಸರ್ಜನಾಂಗ ವ್ಯೂಹ

ಪತ್ರರಂದ್ರ

ಹೃದಯ

ಜೀರ್ಣಾಂಗವ್ಯೂಹ

ಪರಾಗದ ಮೊಳಕೆ

ಸಸ್ಯದ ಸಂತಾನೋತ್ಪಾದಕ ಭಾಗ

ಮೆದುಳು

ನ್ಯೂರಾನ್
ಹೃದಯ


Thursday, January 10, 2019

ಜಲಸಾಕ್ಷರತೆ ಕಾರ್ಯಗಾರ


photo:ದ್ವಾರಕಾ ನಿರಂಜನ್
ಅಂತರ್ಜಲ ನಿರ್ದೇಶನಾಲಯ ಬೆಂಗಳೂರು ಹಾಗೂ ಜಿಲ್ಲಾ ಅಂತರ್ಜಲ ಕಛೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ  ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ಅಂತರ್ಜಲ ಸದ್ಬಳಕೆ, ಸಂರಕ್ಷಣೆ, ಮರುಬಳಕೆ, ನಿರ್ವಹಣೆ, ಅತಿಬಳಕೆ ಮತ್ತು ಅಂತರ್ಜಲ ಮಾಲಿನ್ಯ ನಿಯಂತ್ರಣ ಕುರಿತು ಜಲಸಾಕ್ಷರತೆ ಕಾರ್ಯಗಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಹೇಮಲತಾ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಕಳ ಇವರು ನೆರವೇರಿಸಿದರು. ಶ್ರೀಮತಿ ಜಾನಕಿ ಪಿ. ಹಿರಿಯ ಭೂ ವಿಜ್ಞಾನಿ ಜಿಲ್ಲಾ ಅಂತರ್ಜಲ ಕಛೇರಿ ಮಂಗಳೂರು ಇವರು ಪರಿಸರ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಡಾ| ಭರತೇಶ್-ಮಾಜಿ ಗವರ್ನರ್ ರೋಟರಿ ಜಿಲ್ಲೆ 3180 ಜಲಸಾಕ್ಷರತೆಯ ಕಿರುಹೊತ್ತಗೆಯನ್ನು ಬಿಡುಗಡೆಗೊಳಿಸಿದರು.
 ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಹೇಮಲತಾ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಕಳ ಇವರು ನೆರವೇರಿಸಿದರು. ಶ್ರೀಮತಿ ಜಾನಕಿ ಪಿ. ಹಿರಿಯ ಭೂ ವಿಜ್ಞಾನಿ ಜಿಲ್ಲಾ ಅಂತರ್ಜಲ ಕಛೇರಿ ಮಂಗಳೂರು ಇವರು ಪರಿಸರ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಡಾ| ಭರತೇಶ್-ಮಾಜಿ ಗವರ್ನರ್ ರೋಟರಿ ಜಿಲ್ಲೆ 3180 ಜಲಸಾಕ್ಷರತೆಯ ಕಿರುಹೊತ್ತಗೆಯನ್ನು ಬಿಡುಗಡೆಗೊಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಡಾ| ನಾರಾಯಣ ಶೆಣೈ ಪ್ರಾಧ್ಯಾಪಕರು ಸಿವಿಲ್ ವಿಭಾಗ ಮತ್ತು ಡೀನ್ ಎಮ್.ಐ.ಟಿ ಮಣಿಪಾಲ ಇವರು ಭಗವಹಿಸಿ ಪ್ರಾತ್ಯಕ್ಷಿಕೆ ರಸಪ್ರಶ್ನೆಗಳ ಮೂಲಕ ವಿದ್ಯಾರ್ಥಿಗಳ ಹಸಿರು ಜ್ಞಾನವನ್ನು ಹೆಚ್ಚಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಡಾ| ನಾರಾಯಣ ಶೆಣೈ ಪ್ರಾಧ್ಯಾಪಕರು ಸಿವಿಲ್ ವಿಭಾಗ ಮತ್ತು ಡೀನ್ ಎಮ್.ಐ.ಟಿ ಮಣಿಪಾಲ ಇವರು ಭಗವಹಿಸಿ ಪ್ರಾತ್ಯಕ್ಷಿಕೆ ರಸಪ್ರಶ್ನೆಗಳ ಮೂಲಕ ವಿದ್ಯಾರ್ಥಿಗಳ ಹಸಿರು ಜ್ಞಾನವನ್ನು ಹೆಚ್ಚಿಸಿದರು. ಶ್ರೀ ವಿಜಯರಾಜ್ ಶೆಟ್ಟಿ-ಅಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ ಇವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ಕೆ. ಹರ್ಷಿಣಿ-ಮುಖ್ಯೋಪಾಧ್ಯಾಯರು, ಇಕೋ ಕ್ಲಬ್‍ನ ಮಾರ್ಗದರ್ಶಕ ಶಿಕ್ಷಕರಾದ ಶ್ರೀ ಜೋನ್ ಗೋಲ್ಬರ್ಟ್ ಮಿನೇಜಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ| ದಿನಕರ ಶೆಟ್ಟಿ ಹಿರಿಯ ಭೂ ವಿಜ್ಞಾನಿ ಜಿಲ್ಲಾ ಅಂತರ್ಜಲ ಕಛೇರಿ ಉಡುಪಿ, ಸ್ವಾಗತಿಸಿದರು, ಕಾರ್ಯಕ್ರಮವನ್ನು ಕು| ಅನಘ ನಿರೂಪಿಸಿದರು, ಹಿರಿಯ ಶಿಕ್ಷಕರಾದ ಶ್ರೀ ಕಾಳಿದಾಸ್ ಇವರು  ಸರ್ವರನ್ನೂ ವಂದಿಸಿದರು.
10-01-2019 
ಗುರುವಾರ




Wednesday, January 9, 2019

ಅದ್ವೈತ್ ಶರ್ಮಾ: ಒಲಂಪಿಯಾಡ್ ಸ್ಪರ್ಧೆಯಲ್ಲಿ ಪ್ರಥಮ


ಜಿಲ್ಲಾ ಮಟ್ಟದ ಒಲಂಪಿಯಾಡ್ ಸ್ಪರ್ಧೆಯಲ್ಲಿ ವಿಜೇತ ಅದ್ವೈತ್ 
   ಜಿಲ್ಲಾ ಮಟ್ಟದ ಗಣಿತ-ವಿಜ್ಞಾನ ಒಲಂಪಿಯಾಡ್ ಸ್ಪರ್ಧೆಯಲ್ಲಿ ಕಾರ್ಕಳ ಸುಂದರ ಪುರಾಣಿಕ ಸರ್ಕಾರಿ ಪ್ರೌಢಶಾಲೆ ಪೆರ್ವಾಜೆಯ ಮಾ| ಯು. ಅದ್ವೈತ್ ಶರ್ಮಾ 9ನೇ ತರಗತಿ ವಿದ್ಯಾರ್ಥಿ ಇವರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಶ್ರೀ ಶ್ರೀನಿವಾಸ್ ಭಟ್ ಮತ್ತು ಶ್ರೀಮತಿ ಶಾಲಿನಿ ಇವರ ಸುಪುತ್ರ.

10ನೇ ತರಗತಿ ವಿದ್ಯಾರ್ಥಿಗಳ ಪ್ರೇರಣಾ ಶಿಬಿರ


 ಉದ್ಘಾಟನೆ
07 ಜನವರಿ 2019, ಸೋಮವಾರದಂದು ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ಕಾರ್ಕಳ ತಾಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘ, ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ, ರೋಟರಿ ಕ್ಲಬ್ ಕಾರ್ಕಳ ಇವರ ಸಹಯೋಗದೊಂದಿಗೆ 10ನೇ ತರಗತಿ ವಿದ್ಯಾರ್ಥಿಗಳ ಪ್ರೇರಣಾ ಶಿಬಿರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ವಿ. ಸುನಿಲ್ ಕುಮಾರ್ ಮಾನ್ಯ ಶಾಸಕರು ಕಾರ್ಕಳ ಇವರು ನೆರವೇರಿಸಿದರು. ಶ್ರೀಮತಿ ಹೇಮಲತಾ-ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಕಳ, ಶ್ರೀ ಪ್ರಕಾಶ್ ರಾವ್ ಇನ್ನಾ-ಅಧ್ಯಕ್ಷರು ಕಾರ್ಕಳ ತಾಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘ, ಶ್ರೀ ಶೈಲೇಂದ್ರ ರಾವ್-ಅಧ್ಯಕ್ಷರು ರೋಟರಿ ಕ್ಲಬ್ ಕಾರ್ಕಳ, ಶ್ರೀ ವಿಜಯರಾಜ್ ಶೆಟ್ಟಿ-ಅಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ, ಶ್ರೀಮತಿ ಕೆ. ಹರ್ಷಿಣಿ-ಮುಖ್ಯೋಪಾಧ್ಯಾಯರು, ಶ್ರೀ ಪ್ರವೀಣ್ ಗುಡಿ-ಸಂಪನ್ಮೂಲ ವ್ಯಕ್ತಿಯಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶ್ರೀ ರಾಜೇಂದ್ರ ಭಟ್ ನಿರೂಪಿಸಿದರು.

Tuesday, January 1, 2019

ಪೆರ್ವಾಜೆ ಶಾಲಾ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆ ಮತ್ತು ಶಾಲಾ ವಾರ್ಷಿಕೋತ್ಸವ





 ದಿನಾಂಕ:-08-12-2018 ಶನಿವಾರದಂದು ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ಶ್ರೀ ವಿ. ಸುನಿಲ್ ಕುಮಾರ್ ಮಾನ್ಯ ಶಾಸಕರು ಇವರಿಂದ ಅಟಲ್ ಟಿಂಕರಿಂಗ್ ಲ್ಯಾಬ್ ಉದ್ಘಾಟನೆಗೊಂಡಿತು. ನಂತರ ಪ್ರೌಢಶಾಲಾ ವಿಭಾಗದ ಶಾಲಾ ವಾರ್ಷಿಕೋತ್ಸವವು ನಡೆಯಿತು. ಸಭಾ ವೇದಿಕೆಯಲ್ಲಿ ಅಧ್ಯಕ್ಷರಾಗಿ ಶ್ರೀ ವಿ. ಸುನಿಲ್ ಕುಮಾರ್ ಮಾನ್ಯ ಶಾಸಕರು ಕಾರ್ಕಳ ವಿಧಾನ ಸಭಾ ಕ್ಷೇತ್ರ,             ಶ್ರೀ ಉದಯ ಎಸ್. ಕೋಟ್ಯಾನ್-ಅಧ್ಯಕ್ಷರು ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಜಿಲ್ಲಾ ಪಂಚಾಯತ್ ಉಡುಪಿ, ಶ್ರೀ ಪ್ರದೀಪ್ ರಾಣೆ-ಸ್ಥಳೀಯ ಪುರಸಭಾ ಸದಸ್ಯರು, ಶ್ರೀಮತಿ ಹೇಮಲತಾ ಕೆ.-ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಕಳ, ಶ್ರೀ ಪ್ರವೀಣ್ ಶೆಟ್ಟಿ-ಸಮನ್ವಯಾಧಿಕಾರಿಗಳು ಕ್ಷೇತ್ರ ಸಂಪನ್ಮೂಲ ಕೇಂದ್ರ ಕಾರ್ಕಳ,    ಡಾ| ಮಂಜುನಾಥ ಕೋಟ್ಯಾನ್-ಮಾನ್ಯ ಪ್ರಾಂಶುಪಾಲರು ಶ್ರೀ ಭುವನೇಂದ್ರ  ಕಾಲೇಜು ಕಾರ್ಕಳ,   ಶ್ರೀ ವಿಜಯರಾಜ್ ಶೆಟ್ಟಿ-ಅಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ, ಶ್ರೀಮತಿ ಕೆ. ಹರ್ಷಿಣಿ-ಮುಖ್ಯೋಪಾಧ್ಯಾಯರು, ಶ್ರೀಮತಿ ಲಕ್ಷ್ಮೀ ಹೆಗಡೆ- ಮುಖ್ಯೋಪಾಧ್ಯಾಯರು ಪ್ರಾಥಮಿಕ ಶಾಲಾ ವಿಭಾಗ, ಮಾ| ಸೂರಜ್-ಶಾಲಾ ನಾಯಕ, ಶ್ರೀ ಪ್ರಶಾಂತ್-ಅಧ್ಯಕ್ಷರು ಹಳೆವಿದ್ಯಾರ್ಥಿ ಸಂಘ, ಶ್ರೀಮತಿ ಆಲಿಸ್ ಲೋಬೋ-ಉಪಾಧ್ಯಕ್ಷರು ಶಾಲಾಭಿವೃದ್ಧಿ ಸಮಿತಿ, ಶ್ರೀ ಸತೀಶ್ ಮಡಿವಾಳ ಸದಸ್ಯರು ಶಾಲಾಭಿವೃದ್ಧಿ ಸಮಿತಿ, ಶ್ರೀಮತಿ ಕಲ್ಪನಾ ಸದಸ್ಯರು ಶಾಲಾಭಿವೃದ್ಧಿ ಸಮಿತಿ,, ಉಪಸ್ಥಿತರಿದ್ದರು. ಕಲಿಕೆ, ಸಾಂಸ್ಕøತಿಕ, ಕ್ರೀಡಾ ವಿಭಾಗಗಳಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಬಹುಮಾನಿಸಲಾಯಿತು. ಶಾಲಾ ಮಾಸ ಪತ್ರಿಕೆಗಳಾದ ಗೋಮತಿ, ತಿಂಗಳಿಗೊಂದು-ತರಗತಿಗೊಂದು ಅನಾವರಣಗೊಂಡವು. ವಾರ್ಷಿಕ ಸಂಚಿಕೆಗಳಾದ ಜ್ಞಾನದೀವಿಗೆ, ಚಿತ್ರ-ಚಿಂತನ ಅನಾವರಣಗೊಂಡವು. ಶಾಲಾ ಬ್ಲಾಗ್ ಲೋಕಾರ್ಪಣೆಗೊಂಡಿತು. ಶ್ರೀಮತಿ ನಿರ್ಮಲಾ ಗಣಪತಿ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು.  ಶ್ರೀ ವಿಜಯರಾಜ್ ಶೆಟ್ಟಿ ಸರ್ವರನ್ನೂ ಸ್ವಾಗತಿಸಿದರು. ಶ್ರೀ ಜಟ್ಟೆಪ್ಪ ಸನದಿ ಸರ್ವರನ್ನೂ ವಂದಿಸಿದರು. ಅಪರಾಹ್ನ ಶಾಲಾ ಮತ್ತು ಹಳೆವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು. 

ರಾಷ್ಟ್ರ ಮಟ್ಟದ ಕರಾಟೆ ಕುವರಿ


 
 ಪುಣೆಯ ಭಾರತಿ ವಿದ್ಯಾಭವನದಲ್ಲಿ ದಿನಾಂಕ:-25-12-2018 ಮತ್ತು 26-12-2018ರಂದು ಐಕೆಕೆಎಐ ಅವರು ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯನ್ನು ಆಯೋಜಿಸಿದ್ದು ಕಾರ್ಕಳ ಸುಂದರ ಪುರಾಣಿಕ ಸರ್ಕಾರಿ ಪ್ರೌಢಶಾಲೆ ಪೆರ್ವಾಜೆಯ ಕು| ನಿರೀಕ್ಷಾ ಅಮೀನ್ 9ನೇ ತರಗತಿ ವಿದ್ಯಾರ್ಥಿನಿ ಇವರು 17 ವರ್ಷದ ಒಳಗಿನ ವಯೋಮಿತಿಯ ಕರಾಟೆಯ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಮತ್ತು ಕಬುಡೊದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಇವಳು ಶ್ರೀ ಚಂದ್ರೇಶ ಕೆ. ಅಮೀನ್ ಮತ್ತು ಶ್ರೀಮತಿ ಪ್ರತಿಮಾ ಇವರ ಸುಪುತ್ರಿ. ಇವಳು ಶ್ರೀ ರಂಜಿತ್ ಎಸ್. ಮುಂಡ್ಕೂರು ಇವರಿಂದ ತರಬೇತಿ ಪಡೆಯುತ್ತಿದ್ದಾರೆ.